ಸಂಜೀವ ಆಚಾರ್ಯ

Update: 2017-03-30 13:40 GMT

ಪುತ್ತೂರು,ಮಾ.30: ಕೋರ್ಟ್‌ರಸ್ತೆಯಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಕೆಂಪುಗುಡ್ಡೆ ನಿವಾಸಿ ಸಂಜೀವ ಆಚಾರ್ಯ (57) ಮಂಗಳವಾರ ಮುಂಜಾನೆ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತರಾದರು. ಪುತ್ತೂರು ವಿಶ್ವಕರ್ಮ ಯುವ ಸಮಾಜದ ಸ್ಥಾಪಕ ಸದಸ್ಯರಲ್ಲಿ ಓರ್ವರಾದ ಇವರು, ಸಂಘದ ಅಧ್ಯಕ್ಷರಾಗಿ, ಸದಸ್ಯರಾಗಿ ಸಕ್ರಿಯರಾಗಿದ್ದರು. ಕಳೆದ 40 ವರ್ಷಗಳಿಂದ ಪುತ್ತೂರಿನಲ್ಲಿ ಚಿನ್ನದ ಕೆಲಸ ನಡೆಸುತ್ತಿದ್ದರು. ಮೃತರು ತಾಯಿ, ಪತ್ನಿ, ಮಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ