ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಟ್ಟೀಟ್ ; ಪ್ರಶಾಂತ್ ಭೂಷಣ್ ವಿರುದ್ಧ ಪ್ರಕರಣ ದಾಖಲು
Update: 2017-04-06 08:58 GMT
ಮುಜಾಫರ್ ನಗರ, ಎ.6: ಭಗವಾನ್ ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಟ್ಟೀಟ್ ಮಾಡಿದ ಆರೋಪದಲ್ಲಿ ವಕೀಲ ಮತ್ತು ರಾಜಕಾರಣಿ ಪ್ರಶಾಂತ್ ಭೂಷಣ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಖಿಲ ಭಾರತ ಹಿಂದೂ ಮಹಾ ಸಭಾ ಅಧ್ಯಕ್ಷ ಯೋಗೇಂದ್ರ ವರ್ಮಾ ಅವರು ಸ್ವರಾಜ್ ಅಭಿಯಾನ ಸಂಸ್ಥಾಪಕ ಪ್ರಶಾಂತ್ ಭೂಷಣ್ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟಾಗುವ ರೀತಿಯಲ್ಲಿ ವರ್ತಿಸಿದ್ದಾರೆಂದು ಆರೋಪಿಸಿ, ಸಿವಿಲ್ ಲೈನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹುಡುಗಿಯರನ್ನು ಚುಡಾಯಿಸುವುದರ ವಿರುದ್ಧ ರಚಿಸಲಾದ ಪಡೆಯ ಬಗ್ಗೆ ಪ್ರಶಾಂತ್ ಭೂಷಣ್ ಲೇವಡಿ ಮಾಡಿದ್ದರು. ಹುಡುಗಿಯರನ್ನು ಚುಡಾಯಿಸುವುದರಲ್ಲಿ ಕೃಷ್ಣನದ್ದು ದಂತಕತೆ ಎಂದು ಬರೆದಿದ್ದರು. ಇದರ ವಿರುದ್ಧ ಹಿಂದು ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ ಬೆನ್ನಲ್ಲೇ ಪ್ರಶಾಂತ್ ಭೂಷಣ್ ಟ್ವೀಟ್ ಡಿಲೀಟ್ ಮಾಡಿ ಕ್ಷಮೆ ಯಾಚಿಸಿದ್ದರು.