ರಾಜ್ಯ ಇಂಧನ ಇಲಾಖೆಯಲ್ಲಿ ಅವ್ಯವಹಾರ: ಕುಮಾರಸ್ವಾಮಿಯಿಂದ ಸ್ಪೀಕರ್ಗೆ ಪತ್ರ
Update: 2017-04-08 12:14 IST
ಬೆಂಗಳೂರು, ಎ.8: ರಾಜ್ಯ ಇಂಧನ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತಂತೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಪತ್ರ ಬರೆದಿದ್ದಾರೆ.
ಕೆ.ಬಿ.ಕೋಳಿವಾಡಗೆ ಸುದೀರ್ಘ ಒಂಬತ್ತು ಪುಟಗಳ ಪತ್ರ ಬರೆದಿರುವ ಕುಮಾರಸ್ವಾಮಿ, ಇಂಧನ ಇಲಾಖೆಗೆ ಸಂಬಂಧಿಸಿದ ಕೆಲವು ವಿಚಾರಗಳ ಬಗ್ಗೆ ಸಾಕಷ್ಟು ಭಾರಿ ಕೇಳಿದ್ದರೂ ಇಂಧನ ಇಲಾಖೆ ಕಾರ್ಯದರ್ಶಿ ಮಾಹಿತಿ ನೀಡಿಲ್ಲ. ಆದ್ದರಿಂದ 2004ರಿಂದ 2014ರ ಅವಧಿಯಲ್ಲಿ ಆಗಿರುವ ವಿದ್ಯುತ್ ಉತ್ಪಾದನೆ, ಬಳಕೆ, ಖರೀದಿಯ ಬಗ್ಗೆ ಮಾಹಿತಿ ನೀಡುವಂತೆ ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಇಂಧನ ಇಲಾಖೆಲ್ಲಿ ನಡೆದಿರುವ ಅವ್ಯವಹಾರಗಳು ಕುರಿತು ಸದನದಲ್ಲಿ ಚರ್ಚೆಯಾಗಿ ಸದನ ಸಮಿತಿ ರಚನೆಯಾಗಿತ್ತು. ಇಂಧನ ಇಲಾಖೆಯ ಸಚಿವರೇ ಸದನ ಸಮಿತಿಯ ಅಧ್ಯಕ್ಷರಾಗಿದ್ದರು. ಕುಮಾರಸ್ವಾಮಿ ಕೂಡಾ ಈ ಸಮಿತಿಯ ಸದಸ್ಯರಾಗಿದ್ದಾರ