ಮಂಗಳೂರು: ವಿಮಾನದ ಮೂಲಕ ಶಸ್ತ್ರಾಸ್ತ್ರಗಳನ್ನು ಸಾಗಿಸಲೆತ್ನಿಸಿದ ವ್ಯಕ್ತಿಯ ವಿಚಾರಣೆ

Update: 2017-04-08 14:38 GMT

ಮಂಗಳೂರು, ಎ.8: ವಿಮಾನದ ಮೂಲಕ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ಶಸ್ತ್ರಾಸ್ತ್ರ ಸಾಗಿಸುತ್ತಿದ್ದವನನ್ನು ಸಚ್ಚಿದಾನಂದ ಶೆಟ್ಟಿ ಎಂದು ಗುರುತಿಸಲಾಗಿದ್ದು, ಈತ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. 

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಚ್ಚಿದಾನಂದ ಶೆಟ್ಟಿಯ ಬ್ಯಾಗೇಜ್ ಸ್ಕ್ಯಾನಿಂಗ್ ವೇಳೆ ಈತ ಶಸ್ತ್ರಾಸ್ತ್ರಗಳನ್ನು ಹೊಂದಿರುವುದು ಪತ್ತೆಯಾಗಿದ್ದು, ರಿವಾಲ್ವರ್ ಮತ್ತು 10 ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಸಚ್ಚಿದಾನಂದ ಶೆಟ್ಟಿಯನ್ನು ವಿಚಾರಿಸಿದಾಗ ರಿವಾಲ್ವರ್‌ಗೆ ಲೈಸೆನ್ಸ್ ಹೊಂದಿರುವುದು ತಿಳಿದು ಬಂದಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News