ಎ.13: ಉಡುಪಿ ಕೆಎಸ್ಸಾರ್ಟಿಸಿ ಸಾರ್ವಜನಿಕ ಸಂಪರ್ಕ ಸಭೆ

Update: 2017-04-08 18:33 GMT

ಉಡುಪಿ, ಎ.8: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗದ ವತಿಯಿಂದ ನಿಟ್ಟೂರಿನಲ್ಲಿರುವ ಉಡುಪಿ ಘಟಕದಲ್ಲಿ ಬಸ್‌ಗಳ ಕಾರ್ಯಾಚರಣೆಯ ಕುರಿತಂತೆ ಸಾರ್ವಜನಿಕ ಸಂಪರ್ಕ ಸಭೆಯು ಎ.13ರಂದು ಬೆಳಗ್ಗೆ 11ಕ್ಕೆ ನಡೆಯಲಿದೆ.

ಸಭೆಯಲ್ಲಿ ಪ್ರಯಾಣಿಕರು ಸಂಸ್ಥೆಯ ಬಸ್‌ಗಳ ಕಾರ್ಯಾಚರಣೆಯನ್ನು ಉತ್ತಮಪಡಿಸುವ ಕುರಿತಂತೆ ತಮ್ಮ ಸಲಹೆ-ಸೂಚನೆಗಳನ್ನು ಅಹವಾಲುಗಳನ್ನು ಸಲ್ಲಿಸಬಹುದು ಎಂದು ಕರಾರಸಾಸ ನಿಗಮದ ಉಡುಪಿ ಘಟಕದ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News