ಬೈಕ್‌ಗೆ ವ್ಯಾನ್ ಢಿಕ್ಕಿ: ಓರ್ವ ಸಾವು

Update: 2017-04-09 17:42 GMT

ಹುಳಿಯಾರು, ಎ.9: ಬೈಕ್‌ಗೆ ಮಾರುತಿ ವ್ಯಾನ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹುಳಿಯಾರು ಸಮೀಪದ ಬಳ್ಳೆಕಟ್ಟೆಯಲ್ಲಿ ರವಿವಾರ ಮುಂಜಾನೆ ನಡೆದಿದೆ.

ಬಳ್ಳೆಕಟ್ಟೆ ನಿವಾಸಿ ಸೈಫುಲ್ಲಾ(60) ಸಾವನ್ನಪ್ಪಿದ ದುರ್ದೈವಿ. ಈತ ಬರಗೀಹಳ್ಳಿಯಲ್ಲಿ ಕವ್ವಾಲಿ ಮುಗಿಸಿಕೊಂಡು ಸ್ವಗ್ರಾಮಕ್ಕೆ ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ಎನ್ನಲಾಗಿದೆ. 

ಈ ವೇಳೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಮಾರುತಿ ವ್ಯಾನ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೈಫುಲ್ಲಾಗೆ ತಲೆಗೆ ಹಾಗೂ ಕಾಲಿಗೆ ತೀವ್ರ ಪೆಟ್ಟು ಬಿದ್ದಿದೆ. ತಕ್ಷಣ ಢಿಕ್ಕಿ ಹೊಡೆದ ಮಾರುತಿ ವಾನ್‌ನಲ್ಲಿ ಹುಳಿಯಾರು ಸರಕಾರಿ ಆಸ್ಪತ್ರೆಗೆ ಕರೆ ತರಲಾಗಿದೆ. ಆದರೆ, ಹುಳಿಯಾರು ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಚಿಕ್ಕನಾಯಕನಹಳ್ಳಿ ಸರಕಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಈ ಸಂಬಂಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News