×
Ad

‘ಮಹಾವೀರರ ಸತ್ಯ, ಅಹಿಂಸೆ ಸಂದೇಶ ಇಂದಿಗೂ ಪ್ರಸ್ತುತ’

Update: 2017-04-11 00:11 IST

ಉಡುಪಿ, ಎ.10: ಸತ್ಯ, ಅಹಿಂಸೆಯ ಸಂದೇಶ ವನ್ನು ಜಗತ್ತಿಗೆ ಬೋಧಿಸಿದ ಮಹಾವೀರ ಇಂದಿಗೂ ಪ್ರಸ್ತುತ. 2,600 ವರ್ಷಗಳ ಹಿಂದೆ ಬದುಕಿ, ಉತ್ತಮ ಬದುಕಿಗೆ ಮಾರ್ಗದರ್ಶನ ನೀಡಿದ ಅವರ ಸಂದೇಶಗಳು ನಮ್ಮನ್ನು ಉತ್ತಮ ಬದುಕಿಗೆ ಪ್ರೇರೇಪಿಸುತ್ತದೆ ಎಂದು ಅಪರ ಜಿಲಾಧಿಕಾರಿ ಅನುರಾಧಾ ಹೇಳಿದ್ದಾರೆ.

ಉದ್ಯಾವರ ಕುತ್ಪಾ ಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇ ಜಿನ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸ್ಮಾರಕ ಗೋಲ್ಡನ್ ಜ್ಯುಬಿಲಿ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಶ್ರೀಮಹಾವೀರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತ ನಾಡುತ್ತಿದ್ದರು.

ಎಸ್‌ಡಿಎಂ ಕಾಲೇಜಿನ ಸುವೀರ್ ಜೈನ್ ವಿಶೇಷ ಉಪನ್ಯಾಸ ನೀಡಿದರು.

ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಭಾಕರ ಉಪಾಧ್ಯಾಯ, ಭಾರತೀಯ ಜೈನ್ ಮಿಲನ್ ವಲಯ-8 ರ ಕಾರ್ಯಾಧ್ಯಕ್ಷ ಕೆ.ಪ್ರಸನ್ನಕುಮಾರ್, ಉಡುಪಿ ಜೈನ್ ಮಿಲನ್‌ನ ಜಿಲ್ಲಾಧ್ಯಕ್ಷ ವೈ.ಸುಧೀರ್ ಜೈನ್ ಉಪಸ್ಥಿತರಿದ್ದರು.

ತಹಶೀಲ್ದಾರ್ ಮಹೇಶ್ಚಂದ್ರ ಸ್ವಾಗತಿಸಿದರು, ಶಂಕರದಾಸ್ ಚಂಡ್ಕಳ ಕಾರ್ಯಕ್ರಮ ನಿರೂಪಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ತಾಂತ್ರಿಕ ಮೇಲ್ವೀಚಾರಕಿ ಪೂರ್ಣಿಮಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News