ಎ.14-15: ಅಂಬೇಡ್ಕರ್ ರಾಜ್ಯಮಟ್ಟದ ಅಧ್ಯಯನ ಶಿಬಿರ

Update: 2017-04-11 18:20 GMT

ಉಡುಪಿ, ಎ.11: ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರಾಜ್ಯಮಟ್ಟದ ಅಧ್ಯಯನ ಶಿಬಿರ ಎ.14 ಮತ್ತು 15ರಂದು ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಎ.14ರಂದು ಬೆಳಗ್ಗೆ 9:30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಿ ರುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News