×
Ad

ಲಂಚ ಪ್ರಕರಣ: ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ವಿರುದ್ಧದ ಸಮನ್ಸ್ ರದ್ದು

Update: 2017-04-13 22:13 IST

ಬೆಂಗಳೂರು, ಎ.13: ಅಧಿಕಾರಿಗಳಿಗೆ ಲಂಚ ಪಡೆಯಲು ಕುಮ್ಮಕ್ಕು ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್‌ಗೆ ಮೈಸೂರು ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್‌ನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಸಂಬಂಧ ಸುನೀಲ್ ಬೋಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ಪೀಠ ಈ ಆದೇಶ ನೀಡಿತು.

 ಪ್ರಕರಣವೇನು: 2010ರಲ್ಲಿ ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಲ್ಫೋಸಿಸ್‌ಗೆ ಲಂಚ ಪಡೆಯಲು ಸಚಿವರ ಪುತ್ರ ಸುನೀಲ್ ಬೋಸ್ ಪ್ರೇರೇಪಿಸಿದ್ದರು ಎನ್ನುವ ಆರೋಪವಿದ್ದು, 2013ರಲ್ಲಿ ವಿಚಾರಣೆ ನಡೆಸಿದ ಲೋಕಾಯುಕ್ತರು ಸುನೀಲ್ ಬೋಸ್ ಮತ್ತು ರಾಜು ಹೆಸರನ್ನು ಕೈ ಬಿಟ್ಟಿದ್ದರು. ಆದರೆ, ಇಬ್ಬರನ್ನು ಆರೋಪಿಗಳಾಗಿ ಪರಿಗಣಿಸಬೇಕೆಂದು ದೂರುದಾರ ಬಸವರಾಜು ನ್ಯಾಯಾಲಯದ ಮೊರೆ ಹೋಗಿದ್ದರು.

ಸೆಪ್ಟೆಂಬರ್ 7ರಂದು ಬಸವರಾಜು ಅರ್ಜಿ ಪುರಸ್ಕರಿಸಿದ ಮೈಸೂರಿನ 3ನೆ ಜೆಎಂಎಫ್ ನ್ಯಾಯಾಲಯ, ಪ್ರಕರಣದಲ್ಲಿ ಸುನೀಲ್ ಬೋಸ್ ಎರಡನೆ ಆರೋಪಿಯಾಗಿ, ಮೂರನೆ ಆರೋಪಿಯಾಗಿ ಬೋಸ್ ಗೆಳೆಯ ರಾಜು ಎಂದು ಪರಿಗಣನೆ ಮಾಡಿತ್ತು. ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು.ಸುನೀಲ್ ಬೋಸ್ ನ್ಯಾಯಾಲಯಕ್ಕೆ ಶರಣಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುನೀಲ್ ಬೋಸ್‌ಗೆ ವಾರೆಂಟ್ ಜಾರಿ ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News