ಪಣಂಬೂರಿನಲ್ಲಿ ರಸ್ತೆ ಅಪಘಾತ: ಚೊಕ್ಕಬೆಟ್ಟುವಿನ ಯುವಕ ಮೃತ್ಯು

Update: 2017-04-15 06:44 GMT

ಮಂಗಳೂರು, ಎ.15: ಬಸ್ ಮತ್ತು ಹೋಂಡಾ ಆ್ಯಕ್ಟಿವಾ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಹೋಂಡಾ ಸವಾರ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಕಸ್ಟಮ್ಸ್ ಕಚೇರಿ ಮುಂಭಾಗದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಚೊಕ್ಕಬೆಟ್ಟುವಿನ ಸೋನಾಲ್ ಕಂಪೌಂಡ್ ನಿವಾಸಿ ಶರೀಫ್ ಎಂಬವರ ಪುತ್ರ ಅಬ್ದುಲ್ ಹಿಕ್ರಾಮ್(22) ಎಂದು ಗುರುತಿಸಲಾಗಿದೆ.

ಅವಿವಾಹಿತರಾಗಿದ್ದ ಅಬ್ದುಲ್ ಹಿಕ್ರಾಮ್ ಹೊಟೇಲ್ ಮ್ಯಾನೇಜ್ ಮೆಂಟ್ ಪದವಿ ಮುಗಿಸಿ ಒಂದು ವರ್ಷದ ಹಿಂದೆಯಷ್ಟೇ ಮಂಗಳೂರಿನ ಗೋಲ್ಡ್ ಫಿಂಚ್ ಹೋಟೆಲ್ ಉದ್ಯೋಗಿಯಾಗಿ ಸೇರಿದ್ದರು ಎಂದು ತಿಳಿದುಬಂದಿದೆ. ಹಿಕ್ರಾಮ್ ಎಂದಿನಂತೆ ಇಂದು ಬೆಳಗ್ಗೆ ಚೊಕ್ಕಬೆಟ್ಟುವಿನಿಂದ ಮಂಗಳೂರಿಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಪಣಂಬೂರು ಕಸ್ಟಮ್ಸ್ ಕಚೇರಿ ಮುಂಭಾಗದಲ್ಲಿ ಈ ಅಪಘಾತ ನಡೆದಿದೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ಹಿಕ್ರಾಮ್ ಸ್ಥಳದಲ್ಲೇ ಮೃಪಟ್ಟಿದ್ದರೆನ್ನಲಾಗಿದೆ.
ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News