ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಪರಮೇಶ್ವರ್

Update: 2017-04-17 08:06 GMT

ಬೆಂಗಳೂರು, ಎ.17: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ. ನಮ್ಮ ಪ್ರತಿಷ್ಠೆಗಿಂತ ಪಕ್ಷದ ಪ್ರತಿಷ್ಠೆ ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಲು ಅನೇಕರು ಸಮರ್ಥರಿದ್ದಾರೆ. ಡಿ.ಕೆ.ಶಿವಕುಮಾರ್ ಅವರೂ ಸಮರ್ಥರಿದ್ದಾರೆ. ನಮ್ಮಲ್ಲಿ ಅನೇಕರು ದೇಶ ಕಟ್ಟುವ ನಾಯಕರಿದ್ದಾರೆ. ನಾನಂತೂ ಯಾವುದೇ ಜವಾಬ್ದಾರಿ ನಿಭಾಯಿಸಲು ಸಿದ್ಧನಿದ್ದು, ಮುಂದಿನ ಚುನಾವಣೆಗೆ ಪಕ್ಷವನ್ನು ಸಿದ್ದಗೊಳಿಸುವ ಕೆಲಸ ಈಗಿಂದಾಗಲೇ ಆಗಬೇಕು. ಸಾಮೂಹಿಕ ನಾಯಕತ್ವ ಇನ್ನಷ್ಟು ಬಲಗೊಳ್ಳಬೇಕು ಎಂದರು.

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಎರಡು ಸ್ಥಾನ ಗೆದ್ದಿದ್ದಕ್ಕೆ ಬೀಗುವ ಅಗತ್ಯವಿಲ್ಲ. ಅದು ಜನ ನಮಗೆ ಕೊಟ್ಟ ಬೆಂಬಲವಾಗಿದೆ. ಈಗಿನಿಂದಲೇ ಚುನಾವಣೆಗೆ ಸಿದ್ಧರಾಗಬೇಕಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News