×
Ad

ಬಸ್ ಢಿಕ್ಕಿ :ಪಾದಚಾರಿ ಮೃತ್ಯು

Update: 2017-04-17 21:21 IST

ಬೆಂಗಳೂರು, ಎ.17: ಅತಿವೇಗದಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಸ್ತೂರಬಾ ನಗರದ ರಾಬರ್ಟ್ (58) ಮೃತಪಟ್ಟಿರುವ ಕೂಲಿ ಕಾರ್ಮಿಕ ಎಂದು ಪೊಲೀಸರು ಗುರುತಿಸಿದ್ದಾರೆ.

ಸ್ಥಳೀಯ ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ರಾಬರ್ಟ್ ಸೋಮವಾರ ಬೆಳಗ್ಗೆ 4:30ರ ಸುಮಾರಿಗೆ ಇಲ್ಲಿನ ಮೈಸೂರು ರಸ್ತೆಯ ಹಳೆ ಟೋಲ್‌ಗೇಟ್‌ನ ಪೆಟ್ರೋಲ್ ಬಂಕ್ ಬಳಿ ರಸ್ತೆ ದಾಟುತ್ತಿದ್ದರು. ಈ ವೇಳೆ ಮೆಜೆಸ್ಟಿಕ್‌ನಿಂದ ರಾಜರಾಜೇಶ್ವರಿ ನಗರದ ಕಡೆಗೆ ಚಲಿಸುತ್ತಿದ್ದ ಬಿಎಂಟಿಸಿ ಬಸ್ ರಾಬರ್ಟ್ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣ ದಾಖಲಿಸಿರುವ ಬ್ಯಾಟರಾಯನಪುರ ಸಂಚಾರ ಠಾಣಾ ಪೊಲೀಸರು ಬಸ್ ಚಾಲಕ ಲೋಕೇಶ್ ಎಂಬುವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News