ಪಕ್ಷದ ಶಿಸ್ತು ಉಲ್ಲಂಘನೆ ಕುರಿತು ವಿಚಾರಣೆ : ದಿಗ್ವಿಜಯ್

Update: 2017-04-18 14:08 GMT

ಹುಬ್ಬಳ್ಳಿ, ಎ.18: ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಹಿರಿಯ ನಾಯಕರಾದ ಜನಾರ್ದನ ಪೂಜಾರಿ ಹಾಗೂ ಎಚ್.ವಿಶ್ವನಾಥ್ ವಿರುದ್ಧ ಎ.ಕೆ.ಆಂಟನಿ ನೇತೃತ್ವದ ಶಿಸ್ತು ಸಮಿತಿ ವಿಚಾರಣೆ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ತಿಳಿಸಿದ್ದಾರೆ.

ಮಂಗಳವಾರದಲ್ಲಿ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ಪೂಜಾರಿ ಹಾಗೂ ವಿಶ್ವನಾಥ್ ವಿರುದ್ಧ ಪಕ್ಷದ ಶಿಸ್ತು ಉಲ್ಲಂಘನೆಗೆ ಸಂಬಂಧಿಸಿದ ದೂರುಗಳು ಬಂದ ಹಿನ್ನೆಲೆಯಲ್ಲಿ ಸಮಿತಿ ವಿಚಾರಣೆ ನಡೆಸುತ್ತಿದೆ ಎಂದರು.

ಶಿಸ್ತು ಸಮಿತಿಯ ವಿಚಾರಣೆ ಮುಕ್ತಾಯವಾದ ನಂತರ, ಪಕ್ಷ ಮುಂದಿನ ತೀರ್ಮಾನ ಕೈಗೊಳ್ಳುತ್ತದೆ. ಈ ವಿಷಯವು ಶಿಸ್ತುಸಮಿತಿಯ ಮುಂದಿರುವುದರಿಂದ ನಾನು ಯಾವುದೆ ರೀತಿಯ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಶಿಸ್ತು ಸಮಿತಿ ಏನು ತೀರ್ಮಾನ ಕೈಗೊಳ್ಳುತ್ತದೊ ಕಾದು ನೋಡೋಣ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News