ಅಭಿವೃದ್ಧಿಯೆಡೆಗೆ ಗಮನಹರಿಸಿ

Update: 2017-04-18 18:38 GMT

ಮಾನ್ಯರೆ,

ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿನ ಗೆಲುವು ಆಡಳಿತ ಪಕ್ಷದ ಆತ್ಮ ಸ್ಥೈರ್ಯವನ್ನು ಹೆಚ್ಚಿಸಿದೆ. ಆದರೆ ಈ ಸಂದರ್ಭದಲ್ಲಿ ಚುನಾಯಿತ ಅಭ್ಯರ್ಥಿಗಳು ಕಾರ್ಯಕರ್ತರು ಅಲ್ಲಲ್ಲಿ ಹಮ್ಮಿಕೊಳ್ಳಲಾಗುವ ಸನ್ಮಾನ ಹಾಗೂ ಅಭಿನಂದನಾ ಸಮಾರಂಭಗಳಲ್ಲಿ ಭಾಗವಹಿಸುತ್ತಾ ಕಾಲ ಕಳೆಯುತ್ತಿರುವುದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ.
ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ಹಾಳು ಮಾಡದೆ ತಮ್ಮ ಕ್ಷೇತ್ರಗಳಲ್ಲಿ ನನೆಗುದಿಗೆ ಬಿದ್ದಿರುವ ಅನೇಕ ಯೋಜನೆಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಕ್ರಮ ಕೈಗೊಂಡು ಜನರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಬೇಕು.

ಅಭ್ಯರ್ಥಿಗಳು ಕ್ಷೇತ್ರಗಳ ಅಭಿವೃದ್ಧಿಯ ಕಡೆಗೆ ಗಮನಹರಿಸಿದರೆ ಮುಂದಿನ ಚುನಾವಣೆಯಲ್ಲೂ ಮತ್ತೆ ಗೆಲುವು ತಮ್ಮದಾಗಿಸಲು ಸಾಧ್ಯ. 

Writer - -ರಿಯಾಝ್ ಅಹ್ಮದ್, ರೋಣ

contributor

Editor - -ರಿಯಾಝ್ ಅಹ್ಮದ್, ರೋಣ

contributor

Similar News