ಚಿಕ್ಕಮಗಳೂರು ಜಿಲ್ಲೆಗೆ ತಂಪೆರೆದ ಮಳೆರಾಯ
ಚಿಕ್ಕಮಗಳೂರು, ಎ.19:ಜಿಲ್ಲೆಯ ವಿವಿಧ ಕಡೆಗಳಲ್ಲಿ ಸಿಡಿಲು, ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನರು ನೆಮ್ಮದಿಯ ನಿಟ್ಟುಸಿರುವ ಬಿಡುವಂತೆ ಮಾಡಿದೆ.
ಕೆಲವು ದಿನಗಳ ಹಿಂದೆ ರೇವತಿ ಮಳೆ ವರ್ಷದ ಮೊದಲ ರೂಪದಲ್ಲಿ ಸುರಿದಿತ್ತು. ಸತತ ಆರು ವರ್ಷಗಳಿಂದ ಭೀಕರ ಬರಗಾಲದಿಂದ ಚಿಕ್ಕಮಗಳೂರು ಜಿಲ್ಲೆಯ ಜನರು ನಲುಗಿದ್ದಾರೆ. ಮಲೆನಾಡು, ಅರೆ ಮಲೆನಾಡು ಮತ್ತು ಬಯಲುಸೀಮೆ ಭೂಪ್ರದೇಶಗಳನ್ನು ಒಳಗೊಂಡಿರುವ ಈ ಜಿಲ್ಲೆಯಲ್ಲಿ ಮಳೆ ಇಲ್ಲದೆ ರೈತರು, ಬೆಳೆಗಾರರು, ಕೂಲಿ ಕಾರ್ಮಿಕರು ಸೇರಿದಂತೆ ಸಾಮಾನ್ಯ ಜನರು ತೀವ್ರ ಕಂಗಾಲಾಗುವಂತೆ ಮಾಡಿತ್ತು
ಆದರೆ ಇಂದು 1 ಗಂಟೆಗೂ ಅಧಿಕ ಕಾಲ ಸುರಿದ ನಿರಂತರ ಮಳೆಯಿಂದ ಜನರು ನಿಟ್ಟುಸಿರು ಬಿಡುವಂತೆ ಮಾಡಿದೆ. ಧರೆ ಸ್ವಲ್ವ ತಂಪಾಗುವಂತೆ ಮಾಡಿದೆ. ಒಂದು ಗಂಟೆಗೂ ಅಧಿಕ ಸುರಿದ ಮಳೆಯಿಂದ ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಅಸ್ತವ್ಯಸ್ಥ ವಾತಾವರಣ ನಿರ್ಮಾಣ ಆಗಿತ್ತು. ಮಳೆಯ ಆಗಮನ ರೈತಾಪಿ ಸಹಿತ ಬೆಳೆಗಾರರು ಹಾಗೂ ಸಾಮಾನ್ಯ ಜನರಿಗೆ ಹರ್ಷವನ್ನುಂಟು ಮಾಡಿದೆ.