​ಹಿರಿಯ ಪತ್ರಕರ್ತ ಉಮಾಪತಿಗೆ ಕಸಾಪ ದತ್ತಿ ಪ್ರಶಸ್ತಿ

Update: 2017-04-20 17:19 GMT

ಬೆಂಗಳೂರು, ಎ. 20: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ನಾಗಡಿಕೆ-ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿ’ಯನ್ನು ಹಿರಿಯ ಪತ್ರಕರ್ತ ಡಿ.ಉಮಾಪತಿಗೆ ಹಾಗೂ ‘ಪಂಕಜಶ್ರೀ ದತ್ತಿ ಸಾಹಿತ್ಯ ಪ್ರಶಸ್ತಿ’ಯನ್ನು ಲೇಖಕಿ ಡಾ.ಎಚ್.ಎಲ್.ಪುಷ್ಪಾ ರಿಗೆ ನೀಡಲಾಗುತ್ತಿದೆ.

ನಿರ್ಭಯವಾಗಿ, ಯಾವ ಆಮಿಷಗಳಿಗೂ ಒಳಗಾಗದೆ ನಿಷ್ಪಕ್ಷವಾದ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನಾಗಡಿಕೆ-ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿ ಹಾಗೂ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸುವ ಉದ್ದೇಶದಿಂದ ಪಂಕಜಶ್ರೀ ದತ್ತಿ ಸಾಹಿತ್ಯ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು 10 ಸಾವಿರ ರೂ. ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಕಸಾಪ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News