ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಹತ್ಯೆ: ಪಾಪ್ಯುಲರ್ ಫ್ರಂಟ್ ಖಂಡನೆ

Update: 2017-04-20 17:55 GMT

ಇಂದು ದುಷ್ಕರ್ಮಿಗಳ ತಲವಾರು ದಾಳಿಯಿಂದ ಹತ್ಯೆಯಾದ, ಪರೋಪಕಾರಿ ಸಜ್ಜನ ವ್ಯಕ್ತಿತ್ವವದ ಕರೋಪಾಡಿ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿಯ ಬರ್ಭರ ಹತ್ಯೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು, ಇದನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಇದು ರಾಜಕೀಯದಲ್ಲಿ ಮುಂದುವರಿಯುತ್ತಿರುವ ಅಲ್ಪಸಂಖ್ಯಾತ ನಾಯಕರ ನಿಗೂಢ ಹತ್ಯೆಗೆ ಹೊಸತೊಂದು ಸೇರ್ಪಡೆಯಾಗಿದೆ, ಜೊತೆಗೆ ಇದು ಆತಂಕಕಾರಿ ಬೆಳವಣಿಗೆ ಎಂದು ಪಾಪ್ಯುಲರ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷರಾದ ನವಾಝ್ ಉಳ್ಳಾಲ  ಅಭಿಪ್ರಾಯಪಟ್ಟಿದ್ದಾರೆ. 

ಸಮಾಜ ಸೇವಕರಾಗಿ, ಎಲ್ಲರಲ್ಲೂ ಬೆರೆಯುವ ಜಲೀಲ್ ಕರೋಪಾಡಿಯವರ ಕೊಲೆ ಮಾಡಿದ ಹಂತಕರನ್ನು ಶೀಘ್ರವಾಗಿ ಪತ್ತೆ ಹಚ್ಚುವುದರ ಮೂಲಕ ಪೋಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಕೊಲೆಯ ಹಿಂದಿರುವ ನೈಜ ಹಂತಕರನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News