ಬಸವ ಜಯಂತಿ ಪೂರ್ವಭಾವಿ ಸಭೆ

Update: 2017-04-21 18:40 GMT

 ಉಡುಪಿ, ಎ.21: ಉಡುಪಿ ಜಿಲ್ಲಾಡಳಿತದ ವತಿಯಿಂದ ಎ.29ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರಗುವ ಜಸವ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯು ಅಪರ ಜಿಲ್ಲಾಕಾರಿ ಜಿ.ಅನುರಾಧಾ ಅಧ್ಯಕ್ಷತೆ ಯಲ್ಲಿ ಶುಕ್ರವಾರ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಬಸವ ಜಯಂತಿ ಅಂಗವಾಗಿ ಉಡುಪಿ ಸಿಟಿಬಸ್ ನಿಲ್ದಾಣದಿಂದ ಎಂಜಿಎಂ ಕಾಲೇಜುವರೆಗೆ ಬಸವಣ್ಣರ ಪುತ್ಥಳಿ ಮೆರವಣಿಗೆ, ವಚನ ಗಾಯನ, ಸಮೂಹ ವಚನ ಗಾಯನ, ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಅಪರ ಜಿಲ್ಲಾಕಾರಿ ತಿಳಿಸಿದರು.

ಸಭೆಯಲ್ಲಿ ಶರಣ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಯು.ಸಿ.ನಿರಂಜನ್, ಮಹಾ ಜಗದ್ಗುರು ಬಸವಣ್ಣ ಧರ್ಮಾರ್ಥ ದತ್ತಿಯ ಸದಸ್ಯ ಎಚ್.ಸಿದ್ದೇಶ್ವರಪ್ಪ, ಶಾಂತಗೌಡ ಚಂ. ದೋರನಹಳ್ಳಿ ಹಾಗೂ ವಿವಿಧ ಇಲಾಖೆಯ ಅಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News