ಮಂಗಳೂರು ವಿವಿಯ 52 ಪೌರಕಾರ್ಮಿಕರಿಗೆ ಸನ್ಮಾನ

Update: 2017-04-25 14:39 GMT

ಕೊಣಾಜೆ, ಎ.25: ರಾಮಕೃಷ್ಣ ಮಿಷನ್ ಇದರ ಆಶ್ರಯದಲ್ಲಿ ಮಂಗಳೂರು ವಿವಿಯ ಸ್ವಚ್ಚಗಂಗೋತ್ರಿ ತಂಡದ ಸಹಭಾಗಿತ್ವದೊಂದಿಗೆ ಮಂಗಳಾ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಯುವ ಚೈತನ್ಯ-ರಾಷ್ಟ್ರ ಜಾಗೃತಿ ಮತ್ತು ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಂಗಳೂರು ವಿವಿಯ 52 ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ಮಂಗಳಾದೇವಿ ರಾಮಕೃಷ್ಣ ಮಿಷನ್‌ನ ಸ್ವಚ್ಛ ಮಂಗಳೂರು ಅಭಿಯಾನದ ಸಂಯೋಜಕ ಏಕಗಮ್ಯಾನಂದ ಸ್ವಾಮೀಜಿ ಸಮಾರಂಭದ ಉದ್ಘಾಟಿಸಿದರು.

ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಕೆ.ಭೈರಪ್ಪ ವಹಿಸಿದ್ದರು. ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಎ.ಎಂ.ಖಾನ್, ಮಂಗಳೂರು ವಿವಿ ಪೌರ ಕಾರ್ಮಿಕರಾದ ವಿಜಯ ಲಕ್ಷ್ಮಿ, ಮೋಹಿನಿ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಶೋಕ್ ವರದಿ ವಾಚಿಸಿದರು, ಮನೋಜ್ ಸ್ವಾಗತಿಸಿದರು. ಸುಕ್ಷಿತಾ ರಾವ್ ಕಾರ್ಯಕ್ರಮ ನಿರೂಪಿಸಿ, ಗಿರೀಶ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News