×
Ad

ದ.ಕ.ದಲ್ಲಿ ಆಕಾಂಕ್ಷಿಗಳ ಸಂಖ್ಯೆ ಗಣನೀಯ ಹೆಚ್ಚಳ

Update: 2017-04-27 00:05 IST

 ಮಂಗಳೂರು, ಎ.26: ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಯುವ ಸೇನಾ ನೇಮ ಕಾತಿ ರ್ಯಾಲಿಗೆ ದ.ಕ. ಜಿಲ್ಲೆಯಿಂದ ಅರ್ಜಿ ಸಲ್ಲಿಸಿ ದವರ ಸಂಖ್ಯೆ ಕಳೆದ ವರ್ಷಕ್ಕಿಂತ 10 ಪಟ್ಟು ಹೆಚ್ಚಳವಾಗಿದೆ.

 ಈ ವರ್ಷದ ರ್ಯಾಲಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಎ.25 ಅಂತಿಮ ದಿನವಾಗಿತ್ತು. ಜಿಲ್ಲೆಯಲ್ಲಿ ಈ ವರ್ಷ 368 ಯುವಕರು ಅರ್ಜಿ ಸಲ್ಲಿಸಿದ್ದಾರೆ. 2016ರಲ್ಲಿ ನಡೆದ ಸೇನಾ ನೇಮಕಾತಿ ರ್ಯಾಲಿಗೆ ದ.ಕ. ಜಿಲ್ಲೆಯಿಂದ ಕೇವಲ 34 ಮಂದಿ ಅರ್ಜಿ ಸಲ್ಲಿಸಿದ್ದರು. 2015ರಲ್ಲಿ 118 ಮಂದಿ ಅರ್ಜಿ ಸಲ್ಲಿಸಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಆಕಾಂಕ್ಷಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಸ್ಥಳೀಯ ಸೇನಾ ಅಧಿಕಾರಿಗಳಲ್ಲಿ ಸಂತಸ ಮೂಡಿಸಿದೆ.

 ಭಾರತೀಯ ಸೇನೆಯು ಸೇನೆಯಲ್ಲಿನ ವಿವಿಧ ಹುದ್ದೆ ಗಳ ನೇಮಕಾತಿಗೆ ಪ್ರತೀ ವರ್ಷ ರಾಜ್ಯದ ವಿವಿಧೆಡೆ ನೇಮಕಾತಿ ರ್ಯಾಲಿ ನಡೆಸುತ್ತಿದೆ. ಈ ವರ್ಷ ಮೇ 12 ರಿಂದ ಬಿಜಾಪುರದಲ್ಲಿ ರ್ಯಾಲಿ ನಡೆಯಲಿದೆ. ಸೇನಾ ನೇಮಕಾತಿಯ ಎಲ್ಲಾ ಪ್ರಕ್ರಿಯೆಗಳು ಸಂಪೂರ್ಣ ಉಚಿತವಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ. ಬಿಜಾಪುರದಲ್ಲಿ ನಡೆಯುವ ರ್ಯಾಲಿಗೆ ಸುಮಾರು 18,600 ಆಕಾಂಕ್ಷಿಗಳು ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

  ಸೇನೆಗೆ ಆಯ್ಕೆಯಾಗಲು ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ಪ್ರಸಕ್ತ ವರ್ಷ ಈ ನಿಟ್ಟಿನಲ್ಲಿ ನಗರದ ಕೂಳೂರಿನಲ್ಲಿರುವ ಸೇನಾ ನೇಮಕಾತಿ ಕೇಂದ್ರವು ದ.ಕ. ಜಿಲ್ಲಾಡಳಿತದ ಸಹಯೋಗದಲ್ಲಿ ಸೇನಾ ನೇಮಕಾತಿ ರ್ಯಾಲಿ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡಿತ್ತು. ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ, ಮಾಧ್ಯಮಗಳ ಮೂಲಕ ನೇಮಕಾತಿಯ ಪ್ರಚಾರ ನಡೆಸಿತ್ತು. ಈ ವರ್ಷದ ಮಾ.12ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿತ್ತು. ಸಾಮಾನ್ಯ ಸೈನಿಕ, ಸೈನಿಕ ಟ್ರೇಡ್ಸ್‌ಮೆನ್(ಎಸೆಸೆಲ್ಸಿ ಉತ್ತೀರ್ಣ), ತಾಂತ್ರಿಕ ಸೈನಿಕ(ದ್ವಿತೀಯ ಪಿಯುಸಿ- ಪಿಸಿಎಂ), ನರ್ಸಿಂಗ್ ಸಹಾಯಕ (ದ್ವಿತೀಯ ಪಿಯುಸಿ-ಪಿಸಿಬಿ) ಹಾಗೂ ಸೈನಿಕ ಗುಮಾಸ್ತ (ದ್ವಿತೀಯ ಪಿಯುಸಿ ಇಂಗ್ಲಿಷ್, ಅಕೌಂಟ್ಸ್/ಗಣಿತ) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

  ಆನ್‌ಲೈನ್‌ನಲ್ಲಿ ನೋಂದಾಯಿಸಿರುವ ಎಲ್ಲಾ ಅಭ್ಯರ್ಥಿಗಳು ಮೇ 2ರಿಂದ ವೆಬ್‌ಸೈಟ್‌ನಿಂದ ತಮ್ಮ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ತಮಗೆ ಸೂಚಿಸಿದ ದಿನ ಮತ್ತು ಸಮಯದಂದೇ ಬಿಜಾಪುರದ ಸೈನಿಕ ಶಾಲೆಯಲ್ಲಿ ವರದಿ ಮಾಡಿಕೊಳ್ಳಬೇಕು. ಹಾಜರಾಗಲು ವಿಳಂ ಬವಾದರೆ ನೇಮಕಾತಿಗೆ ಅನರ್ಹಗೊಳ್ಳಲಿದ್ದಾರೆ. ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳು ಮೊದಲ ಹಂತ ದಲ್ಲಿ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಬೇಕು. ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸ ಲಾಗುವುದು. ಈ ಎರಡು ಹಂತದಲ್ಲಿ ಉತ್ತೀರ್ಣ ರಾದವರು ಲಿಖಿತ ಪರೀಕ್ಷೆ ಬರೆದು, ಇದರಲ್ಲಿ ಪಾಸ್ ಆದವರು ಸೇನೆಗೆ ಆಯ್ಕೆಯಾಗಿ ತರಬೇತಿಗೆ ಒಳಗಾಗಲಿದ್ದಾರೆ.

ಈ ಬಗ್ಗೆ ಯಾವುದೇ ಬಾಹ್ಯ ವ್ಯಕ್ತಿಗಳ, ಏಜೆಂಟರ ಮಾತಿಗೆ ಮರುಳಾಗಿ ದಾಖಲೆಗಳನ್ನು ನೀಡದಂತೆ ಮಂಗಳೂರು ಸೇನಾ ನೇಮಕಾತಿ ಕೇಂದ್ರದ ನಿರ್ದೇಶಕ ಕರ್ನಲ್ ಪ್ರಶಾಂತ್ ಪೇಟ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿದವರ ಜಿಲ್ಲಾವಾರು ವಿವರ

ದ.ಕ. -368, ಉಡುಪಿ-136, ಉ.ಕ.- 1,250, ಶಿವಮೊಗ್ಗ -328, ಹಾವೇರಿ-921, ಗದಗ-1,770, ದಾವಣಗೆರೆ -1,641, ಧಾರವಾಡ-1,726, ಚಿಕ್ಕಮಗಳೂರು-201, ಬಿಜಾಪುರ- 4,175, ಬಾಗಲಕೋಟೆ-5,938.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News