ದುಬೈಗೆ ತೆರಳಿದ ಸಿಎಂ ಸಿದ್ದರಾಮಯ್ಯ
Update: 2017-04-27 11:13 IST
ಬೆಂಗಳೂರು, ಎ.27: ಮೂರು ದಿನಗಳ ಪ್ರವಾಸಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದುಬೈಗೆ ಪ್ರಯಾಣ ಬೆಳೆಸಿದರು.
ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರು ಅಧಿಕೃತ ನಿವಾಸ "ಕಾವೇರಿ"ಯಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ವಿದೇಶ ಪ್ರಯಾಣಕ್ಕೆ ಶುಭ ಕೋರಿದರು. ಕರ್ನಾಟಕ ಅನಿವಾಸಿ ಭಾರತೀಯರ ವೇದಿಕೆ ಉದ್ಘಾಟನೆ, ಕೈಗಾರಿಕೋದ್ಯಮಿಗಳ ಜೊತೆ ಮಾತುಕತೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿ ರವಿವಾರ ಬೆಂಗಳೂರಿಗೆ ವಾಪಸಾಗುವರು.