ಈಶ್ವರಪ್ಪರನ್ನು ವಿಪಕ್ಷ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಅಂತಿಮ ನಿರ್ಧಾರ:ವೀರಯ್ಯ

Update: 2017-04-28 04:31 GMT

 ಬೆಂಗಳೂರು, ಎ.28: "ಇನ್ನು ಎರಡು-ಮೂರು ದಿನಗಳಲ್ಲಿ ಬಿಜೆಪಿಯ ವಿಧಾನಪರಿಷತ್ ಸದಸ್ಯರುಗಳ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಕೆಎಸ್ ಈಶ್ವರಪ್ಪರ ನಡೆ ಬಗ್ಗೆ ಚರ್ಚಿಸಲಾಗುತ್ತದೆ. ಈಶ್ವರಪ್ಪರನ್ನು ವಿಧಾನಪರಿಷತ್ ವಿಪಕ್ಷ ಸ್ಥಾನದಿಂದ ಕೆಳಗಿಳಿಸುವ ಕುರಿತು ಈ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ" ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾದ ಬಳಿಕ ವೀರಯ್ಯ ಈ ವಿಷಯ ತಿಳಿಸಿದರು.

ಇದೇ ವೇಳೆ, ಹೈಕಮಾಂಡ್‌ನ್ನು ಭೇಟಿಯಾಗಲು ನಿರ್ಧರಿಸಿರುವ ಯಡಿಯೂರಪ್ಪ ರಾಜ್ಯದ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಬಿಎಸ್‌ವೈ ದಿಲ್ಲಿಗೆ ತೆರಳಲು ನಿರ್ಧರಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News