ಜಲೀಲ್ ಕರೋಪಾಡಿ ಹತ್ಯೆ ಪ್ರಕರಣ: ಸಿಒಡಿ ತನಿಖೆಗೆ ಆಗ್ರಹ

Update: 2017-04-28 17:29 GMT

ವಿಟ್ಲ, ಎ.28: ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಜಮೀಯ್ಯತುಲ್ ಫಲಾಹ್ ಕಾರ್ಯಕಾರಿ ಸಮಿತಿ ಸದಸ್ಯ ಜಲೀಲ್ ಕರೋಪಾಡಿ ಅಬ್ದುಲ್ ಜಲೀಲ್ ಅವರ ಹತ್ಯೆಯನ್ನು ಖಂಡಿಸಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕವು ಪ್ರಕರಣವನ್ನು ಸಿಒಡಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದೆ.

ಹತ್ಯೆ ನಡೆದು ವಾರಗಳು ಕಳೆದರೂ ಇನ್ನೂ ಅಪರಾಧಿಗಳ ಬಂಧನವಾಗದೆ ಇರುವುದು, ಸ್ಥಳೀಯವಾಗಿ ಹಾಗೂ ಮಾಧ್ಯಮಗಳಲ್ಲಿ ಹತ್ಯೆಯ ಕುರಿತು ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಪ್ರಕರಣದ ಹಿನ್ನಲೆಯ ಹಾಗೂ ನೈಜ ಆರೋಪಿಗಳ ಬಂಧನದ ದೃಷ್ಟಿಯಲ್ಲಿ ಸಿಒಡಿ ತನಿಖೆ ನಡೆಸುವಂತೆ ರಾಜ್ಯ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಜಮೀಯ್ಯತುಲ್ ಪಲಾಹ್ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News