ಬಿಜೆಪಿಯ ಒಳಜಗಳ : ನಾಲ್ವರಿಗೆ ಗೇಟ್ ಪಾಸ್

Update: 2017-04-30 08:01 GMT

ಬೆಂಗಳೂರು, ಎ.30: ರಾಜ್ಯ ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪದಲ್ಲಿ ಬಿಜೆಪಿಯ ನಾಲ್ವರು ನಾಯಕರನ್ನು ಅಮಾನತು ಮಾಡಲಾಗಿದೆ.

 ರಾಜ್ಯ ಬಿಜೆಪಿ ಉಪಾಧ್ಯಕ್ಷರುಗಳಾದ ಭಾನು ಪ್ರಕಾಶ್ ಮತ್ತು ನಿರ್ಮಲ್ ಕುಮಾರ್ ಸುರಾನಾ, ರೈತ ಮೋರ್ಚಾ ಉಪಾಧ್ಯಕ್ಷ ರೇಣುಕಾಚಾರ್ಯ, ಮತ್ತು ಪಕ್ಷದ ವಕ್ತಾರ ಗೋ. ಮಧುಸೂದನ್ ಅವರನ್ನು ಬಿಜೆಪಿಯ ಹುದ್ದೆಗಳಿಂದ ವಜಾಗೊಳಿಸಲಾಗಿದೆ.

 ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ಬಿಜೆಪಿಯ ನಾಲ್ವರು ನಾಯಕರನ್ನು ಪಕ್ಷದ ವಿವಿಧ ಪದಾಧಿಕಾರಿಗಳ ಹುದ್ದೆಯಿಂದ ತೆಗೆದುಹಾಕಿ ಆದೇಶ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

 ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಅವರು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ  ಯಡಿಯೂರಪ್ಪ ಮತ್ತು ಮಾಜಿ ಅಧ್ಯಕ್ಷ ಈಶ್ವರಪ್ಪ ಬಣಗಳ ನಡುವಿನ ಭಿನ್ನಮತವನ್ನು  ಬಗೆಹರಿಸಲು ಬಿಜೆಪಿ ನಾಯಕರ ಜೊತೆ ಚರ್ಚಿಸಿದ್ದಾರೆ  ಎಂದು  ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News