ದಾಳಿಂಬೆ, ದ್ರಾಕ್ಷಿ ಬೆಳೆಗಳ ಉಚಿತ ತರಬೇತಿ ಶಿಬಿರ

Update: 2017-04-30 11:51 GMT

ಮಂಗಳೂರು, ಎ.30: ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಾಗಲಕೋಟ ಇವರಿಂದ ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಳ ಬಗ್ಗೆ 3 ದಿನಗಳ ಉಚಿತ ತರಬೇತಿ ಶಿಬಿರವನ್ನು ಮೇ ತಿಂಗಳಲ್ಲಿ ಏರ್ಪಡಿಸಲಾಗಿದೆ.

ಶಿಬಿರದಲ್ಲಿ ದಾಳಿಂಬೆ ಮತುತಿ ದ್ರಾಕ್ಷಿ ಬೆಳೆಗಳ ಅಧಿಕ ಇಳುವರಿಗೆ ಅನುಸರಿಸಬೇಕಾದ ಆಧುನಿಕ ಬೇಸಾಯ ಕ್ರಮಗಳು, ಸಾವಯವ ಕೃಷಿ ತಂತ್ರಜ್ಞಾನ, ಸೂಕ್ತ ನೀರಾವರಿ ಪದ್ಧತಿಗಳು, ಸಂಸ್ಕರಣಾ ಕ್ರಮಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ಆಸಕ್ತ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ವಿವರಗಳನ್ನು ಮೇ 12 ರೊಳಗೆ ನೊಂದಾಯಿಸಲು ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಗದ್ದನಕೇರಿ ರೋಡ್, ಬಾಗಲಕೋಟ - 587103 ಮೊಬೈಲ್ ಸಂಖ್ಯೆ: 9482630790 ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News