ಚೆಂಬುಗುಡ್ಡೆಯಲ್ಲಿ ಸರಣಿ ಅಪಘಾತ: ನಾಲ್ವರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ

Update: 2017-05-03 13:12 GMT

ಮಂಗಳೂರು, ಮೇ 3: ನೀರಿನ ಟ್ಯಾಂಕರೊಂದು ಮೂರು ಬೈಕ್‌ಗಳಿಗೆ ಢಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಸುಮಾರು 6:15ಕ್ಕೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಚೆಂಬುಗುಡ್ಡೆಯ ಮಸೀದಿ ಬಳಿಯಲ್ಲಿ ನಡೆದಿದೆ.

ಘಟನೆಯಲ್ಲಿ ಬೈಕ್‌ನಲ್ಲಿದ್ದ ನಾಲ್ಕು ಮಂದಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ನೀರಿನ ಟ್ಯಾಂಕರ್ ಚಾಲಕ ನಿಯಂತ್ರಣ ಕಳೆದು ಮೂರು ಬೈಕ್‌ಗಳಿಗೆ ಢಿಕ್ಕಿ ಹೊಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News