​ಸರಗಳ್ಳತನ: ಯುವಕನನ್ನು ಹಿಡಿದ ಸಾರ್ವಜನಿಕರು

Update: 2017-05-03 17:18 GMT

ಬೆಂಗಳೂರು, ಮೇ 3: ವೃದ್ಧೆಯ ಸರ ಕದ್ದು ಪರಾರಿಯಾಗುತ್ತಿದ್ದ ಯುವಕನನ್ನು ಹಿಡಿದು ಸಾರ್ವಜನಿಕರು ಥಳಿಸಿರುವ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿಜಯ ನಗರ ಸ್ವಿಮ್ಮಿಂಗ್ ಪೂಲ್ ಬಳಿ ಈ ಘಟನೆ ನಡೆದಿದ್ದು, ಗಜೇಂದ್ರ ಯಾನೆ ಅಮಾವಾಸೆ ಎಂಬಾತ ಸಿಕ್ಕಿಬಿದ್ದಿರುವ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ. ಕೆಂಪಮ್ಮ ಎಂಬವರ ಸರ ಕಿತ್ತು ಪರಾರಿಯಾಗುತ್ತಿದ್ದ. ಇದನ್ನು ಕಂಡ ಸಾರ್ವಜನಿಕರು ಗಜೇಂದ್ರನನ್ನು ಹಿಡಿದು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ಬಳಿಕ ಜನರೇ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News