ಮೇ 13: ನೀರು, ನೈರ್ಮಲ್ಯ ಮಾಹಿತಿ ಕಾರ್ಯಾಗಾರ

Update: 2017-05-03 18:34 GMT

 ಮಣಿಪಾಲ, ಮೇ 3: ನೀರಿನ ಪ್ರಾಮುಖ್ಯತೆಯನ್ನು ಅರಿತು ಅದರ ಸಂರಕ್ಷಣೆ ಮತ್ತು ನಿರ್ವಹಣೆಯ ಕುರಿತಂತೆ ಜಾಗೃತಿ ಮೂಡಿಸಲು ‘ನೀರು, ನೈರ್ಮಲ್ಯ ಮತ್ತು ಆರೋಗ್ಯ’ ಎಂಬ ವಿಷಯದ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಶಿವಳ್ಳಿಯಲ್ಲಿ ಆಯೋಜಿಸಿದೆ.

ಮೇ 13ರಂದು ಬೆಳಗ್ಗೆ 9:30ರಿಂದ ಸಂಜೆ 4ರವರೆಗೆ ಮಣಿಪಾಲ-ಅಂಬಾಗಿಲು ರಸ್ತೆಯ ಭಾರತೀಯ ವಿಕಾಸ ಟ್ರಸ್ಟ್ ಸಭಾಂಗಣದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರ ಉಚಿತವಾಗಿದ್ದು, ಈ ಕಾರ್ಯಾಗಾರದಲ್ಲಿ ಭಾಗವಹಿಸುವವರು ದೂ.ಸಂಖ್ಯೆ: 0820- 2570263ನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News