×
Ad

ಬೈಕ್‌-ಮಿನಿ ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2017-05-04 23:10 IST

ಮುಂಡಗೋಡ, ಮೇ 4: ಬೈಕ್ ಮತ್ತು ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಹುಬ್ಬಳ್ಳಿ-ಶಿರಸಿ ರಸ್ತೆಯ ಕಾವಲಕೊಪ್ಪ ಗ್ರಾಮದಲ್ಲಿ ಗುರವಾರ ಬೆಳಗ್ಗೆ ಸಂಭವಿಸಿದೆ

ಮೃತಪಟ್ಟ ಬೈಕ್ ಸವಾರನನ್ನು ಕಾತೂರ ಪಂಚಾಯತ್ ವ್ಯಾಪ್ತಿಯ ಮುಡಸಾಲಿ ಗ್ರಾಮದ ಮಂಜುನಾಥ ಹನಕನಳ್ಳಿ (30) ಎಂದು ಗುರುತಿಸಲಾಗಿದೆ.

ಲಾರಿಯು ಶಿರಸಿ ಕಡೆಗೆ ಹಾಗೂ ಬೈಕ್ ಮುಂಡಗೋಡದ ಕಡೆಗೆ ಸಾಗುತ್ತಿದ್ದಾಗ ಕಾವಲಕೊಪ್ಪ ಗ್ರಾಮದ ಹತ್ತಿರ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಮಂಜುನಾಥ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ ಮೃತಪಟ್ಟಿದ್ದಾರೆ. ಬೈಕ್ ಸಹ ಸವಾರ ಮಾಂತೇಶ ಜಾಧವ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News