ಸಿಡಿಲಿಗೆ ಓರ್ವ ಬಲಿ: ಮತ್ತೋರ್ವನಿಗೆ ಗಾಯ

Update: 2017-05-06 15:00 GMT

ಚಿಕ್ಕಮಗಳೂರು, ಮೇ.6: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪ ಶನಿವಾರ ನಡೆದಿದೆ.

ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಕರಡಿಖಾನ್ ಎಸ್ಟೇಟ್ ಬಳಿಯ ನಿವಾಸಿ ವೆಂಕಟೇಶ್ (42) ಸಿಡಿಲಿಗೆ ಬಲಿಯಾದವರು. ಅವರ ಜತೆಗಿದ್ದ ಇನ್ನೋರ್ವ ವ್ಯಕ್ತಿಗೂ ತೀವ್ರ ಸ್ವರೂಪದ ಗಾಯಗಳಾಗಿದ್ದು, ಸೊಂಟದಿಂದ ಕೆಳಗಿನ ಭಾಗವು ಸಂಪೂರ್ಣ ಸ್ವಾಧೀನವನ್ನು ಕಳೆದುಕೊಂಡಿದೆ. ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಾಯಾಳುವಿಗೆ ತುರ್ತು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆ ನಿಮಿತ್ತ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಿಡಿಲಿಗೆ ಬಲಿಯಾದ ವೆಂಕಟೇಶ್ ಟಿಂಬರ್ ಕಾರ್ಮಿಕರಾಗಿದ್ದಾರೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News