ಕೈಕೊಟ್ಟ ವಿದ್ಯುತ್: ವೇಣು ಗೋಪಾಲ್‌ ಭಾಷಣ ಅರ್ಧಕ್ಕೆ ಮೊಟಕು

Update: 2017-05-08 06:55 GMT

ಬೆಂಗಳೂರು, ಮೇ 8: ಪಕ್ಷದಲ್ಲಿ ಅಲ್ಲೊಂದು ಇಲ್ಲೊಂದು ಸಮಸ್ಯೆ ಇದ್ದೇ ಇರುತ್ತದೆ. ಆದರೆ ಕರ್ನಾಟಕ ರಾಜ್ಯದ ಕಾಂಗ್ರೆಸ್ ನಲ್ಲಿ  ಯಾವುದೇ ಗುಂಪುಗಾರಿಕೆ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅಭಿಪ್ರಾಯಪಟ್ಟಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ  ಮೊದಲ ಬಾರಿ ಅವರು ಪಕ್ಷದ ಕಾರ್ಯಕರ್ತರು, ಜಿಲ್ಲಾ ನಾಯಕರ ಜೊತೆ ಪ್ರತ್ಯೇಕ ಸಭೆ ನಡೆಸಿ ಅವರ  ಅಭಿಪ್ರಾಯ ಕೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಎಲ್ಲರ ಅಭಿಪ್ರಾಯ ಪಡೆದು ಕೆಪಿಸಿಸಿ ಅಧ್ಯಕ್ಷರ ನೇಮಕದ  ಬಗ್ಗೆ ಪಕ್ಷದ ಹೈಕಮಾಂಡ್‌ ಜೊತೆ ಚರ್ಚಿಸಲಾಗುವುದು ಎಂದರು.

ರಾಜ್ಯ ಕಾಂಗ್ರೆಸ್ ನಲ್ಲಿ ಸಮಸ್ಯೆ ಇರುವುದನ್ನು ಒಪ್ಪಿಕೊಂಡ ವೇಣುಗೋಪಾಲ್.  ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದರು.

ವೇಣುಗೋಪಾಲ್‌ ಮಾತನಾಡುವಾಗ ಅವರ ಭಾಷಣಕ್ಕೆ ವಿದ್ಯುತ್ ಸಮಸ್ಯೆ ಎದುರಾಯಿತು. ವಿದ್ಯುತ್‌ ಕೈಕೊಟ್ಟ ಹಿನ್ನೆಲೆಯಲ್ಲಿ ವೇಣುಗೋಪಾಲ್‌ ತನ್ನ ಭಾಷಣವನ್ನು ಅರ್ಧದಲ್ಲಿ ನಿಲ್ಲಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News