×
Ad

ಮುಖ್ಯಮಂತ್ರಿ ಸ್ವಯಂ ಉದ್ಯೋಗ ಸೃಜನ ಯೋಜನೆ: ಅರ್ಜಿ ಆಹ್ವಾನ

Update: 2017-05-10 19:22 IST

ಮಂಗಳೂರು, ಮೇ 10: ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಮೂಲಕ 2017-18 ನೇ ಸಾಲಿನಲ್ಲಿ ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆಯಡಿಯಲ್ಲಿ ಬ್ಯಾಂಕಿನ ಆರ್ಥಿಕ ಸಾಲದ ಮೂಲಕ ಅರ್ಹ ಫಲಾನುಭವಿಗಳಿಗೆ ಅವಕಾಶ ಕಲ್ಪಿಸಲಾಗುವುದು.

ಈ ಯೋಜನೆಯ ಮುಖ್ಯಾಂಶಗಳು
ಯಾವುದೇ ಗ್ರಾಮೀಣ ಪ್ರದೇಶ ಮತ್ತು 2001ರ ಜನಗಣತಿಯಲ್ಲಿ 20,000 ಜನರಿಗಿಂತ ಕಡಿಮೆ ಇರುವ ಪಟ್ಟಣವೆಂದು ವರ್ಗೀಕರಿಸಿರುವ ಪ್ರದೇಶದಲ್ಲಿನ ಅಭ್ಯರ್ಥಿಗಳು ಅರ್ಹರುತ್ತಾರೆ. ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಸಾಮಾನ್ಯ ವರ್ಗದವರಿಗೆ. ಹಾಗೂ ಗರಿಷ್ಠ 45 ವರ್ಷ ವಿಶೇಷ ವರ್ಗದವರಿಗೆ. (ಮಹಿಳೆ / ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ/ ಹಿಂದುಳಿದ ವರ್ಗ/ ಅಲ್ಪ ಸಂಖ್ಯಾತರು / ಮಾಜಿ ಯೋಧರು / ಅಂಗವಿಕಲರು). ಕನಿಷ್ಠ 8ನೆ ತರಗತಿ ತೇರ್ಗಡೆಯಾಗಿರುವ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.

ಯಾವುದೇ ಆದಾಯದ ಮಿತಿ ಇರುವುದಿಲ್ಲ. ಪ್ರಥಮ ಪೀಳಿಗೆ ಉದ್ಯಮಶೀಲರಿಗೆ ಮಾತ್ರ ಪ್ರತಿ ಘಟಕಕ್ಕೆ ಗರಿಷ್ಠ 10 ಲಕ್ಷ ಯೋಜನಾ ವೆಚ್ಚದ ಕಿರು ಉತ್ಪಾದನಾ ಘಟಕಗಳನ್ನು ಹಾಗೂ ಸೇವಾ ಉದ್ಯಮಗಳನ್ನು ಪ್ರಾರಂಭಿಸಲು ವಿವಿಧ ಹಣಕಾಸು ಸಂಸ್ಥೆಗಳ ಮೂಲಕ ಸಾಲ ನೀಡಲಾಗುವುದು. ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯದಿಂದ ಸಾಮಾನ್ಯ ವರ್ಗದ ಉದ್ಯಮಶೀಲರಿಗೆ ಯೋಜನಾ ವೆಚ್ಚದ ಶೇ.25 ರಷ್ಟು (ಗರಿಷ್ಠ ರೂ.2,50,000/- ರ ವರೆಗೆ) ಹಾಗೂ ವಿಶೇಷ ವರ್ಗದ ಉದ್ಯಮಶೀಲರಿಗೆ ಯೋಜನಾ ವೆಚ್ಚದ ಶೇ.35ರಷ್ಟು (ಗರಿಷ್ಠ ರೂ.3,50,000-ವರೆಗೆ) ಸಹಾಯಧನವನ್ನು ನೀಡಲಾಗುವುದು.

 ಈ ಯೋಜನೆಯನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಯೆಯ್ಯಡಿ,ಮಂಗಳೂರು ಹಾಗೂ ಜಿಲ್ಲಾ ಅಧಿಕಾರಿಗಳು, ಖಾದಿ ಗ್ರಾಮೋದ್ಯೋಗ ಮಂಡಳಿ, ಮಹಾನಗರಪಾಲಿಕೆ ಕಟ್ಟಡ, ಲಾಲ್‌ಬಾಗ್, ಮಂಗಳೂರು ಇವರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಹತೆಯುಳ್ಳ ಆಸಕ್ತ ಯುವಜನರು www.cmegp.kar.nic.in  ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಜೂನ್ 12ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಎಲ್ಲಾ ದಾಖಲೆಗಳೊಂದಿಗೆ ಸಲ್ಲಿಸಲು ಕೊನೆಯ ದಿನ ಜೂನ್ 12.
 ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು,ಜಿಲ್ಲಾ ಕೈಗಾರಿಕಾ ಕೇಂದ್ರ, ಯೆಯ್ಯಿಡಿ, ಮಂಗಳೂರು ಇವರ ಕಚೇರಿ, ದೂರವಾಣಿ ಸಂಖ್ಯೆ: 0824-2212494, 2214021 ಸಂಪರ್ಕಿಸಲು ಜಂಟಿ ನಿರ್ದೇಶಕರು ದ.ಕ. ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News