ಎಚ್.ವಿಶ್ವನಾಥ್ ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ ಬಿಎಸ್‌ವೈ

Update: 2017-05-13 03:50 GMT

ಮಂಗಳೂರು, ಮೇ 13: ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಬಿಜೆಪಿ ಸೇರ್ಪಡೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಈ ಬಗ್ಗೆ ಹರಡಿರುವ ವಿಚಾರ ಸತ್ಯಕ್ಕೆ ದೂರವಾದುದು ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಂಗಳೂರಿನಲ್ಲಿಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಾ ಈ ವಿಚಾರ ಸ್ಪಷ್ಟಪಡಿಸಿದರು.
ಬಿಜೆಪಿಯಲ್ಲಿ ಯಾವುದೆ ಗೊಂದಲವಿಲ್ಲ. ಮೇ 18ರಿಂದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಆರಂಭಿಸುತ್ತೇನೆ. ನಾವೆಲ್ಲ ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ ಎಂದು ಯಡಿಯೂರಪ್ಪ ನುಡಿದರು.

ಕರ್ನಾಟಕ ಸರ್ಕಾರ ದೇಶದಲ್ಲಿ ಭ್ರಷ್ಟ ಸರಕಾರದಲ್ಲಿ ಮೊದಲನೆ ಸ್ಥಾನದಲ್ಲಿದೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ರಾಜ್ಯಗಳ ಪೈಕಿ ಎರಡನೆ ಸ್ಥಾನದಲ್ಲಿದೆ. ಕೇಂದ್ರ ಸರಕಾರ ಅನುದಾನ ಕೊಟ್ಟರೂ ಹೆಚ್ಚು ಸಾಲ ಮಾಡಿದ ರಾಜ್ಯಗಳಲ್ಲಿ ಒಂದಾಗಿದೆ. ಭೀಕರ ಬರಗಾಲವಿದ್ದರೂ ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಿಲ್ಲ. ಇದು ನಾಲ್ಕು ವರ್ಷಗಳ ಸಿದ್ದರಾಮಯ್ಯ ಸರಕಾರದ ಸಾಧನೆಯಾಗಿದೆ ಎಂದು ಲೇವಡಿ ಮಾಡಿದ ಯಡಿಯೂರಪ್ಪ, ಈ ವಿಚಾರವಾಗಿ ಮುಖ್ಯಮಂತ್ರಿ ಅವರು ಸದನದಲ್ಲಿ ಉತ್ತರ ನೀಡಲಿ ಎಂದು ಸವಾಲೆಸೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News