ಹೊಸಕೋಟೆ: ರಕ್ತ ಚಂದನ ತುಂಡುಗಳಿದ್ದ ವಾಹನ ಪೊಲೀಸರ ವಶ

Update: 2017-05-13 18:05 GMT

ಬೆಂಗಳೂರು, ಮೇ 13: ಹೊಸಕೋಟೆ-ಸೂಲಿಬೆಲೆ ಮಾರ್ಗದ ಲಕ್ಕೊಂಡಹಳ್ಳಿ ಸಮೀಪ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರಕ್ತ ಚಂದನ ತುಂಡುಗಳನ್ನು ವಶಪಡಿಸಿಕೊಳ್ಳುವಲ್ಲಿ ಹೊಸಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು ನಾಲ್ವರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಅಂದಾಜಿಸಿದ್ದು, ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News