ಮೋದಿ ಶ್ವೇತಪತ್ರ ಹೊರಡಿಸಲಿ: ಐವನ್

Update: 2017-05-17 12:14 GMT

ಮಂಗಳೂರು, ಮೇ 17: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷಗಳಾಗುತ್ತಿದೆ. ಆದರೆ, ಅವರು ಯಾವ ಸಾಧನೆ ಮಾಡಿದ್ದಾರೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದರು.

ಬುಧವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭ ಮೋದಿ ಸಾಕಷ್ಟು ಅಂಶಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದರು. ಆದರೆ, ಅದರಲ್ಲಿ ಯಾವುದನ್ನು ಈಡೇರಿಸಿದ್ದಾರೆ ಎಂಬುದು ಜನರಿಗೆ ತಿಳಿಯಬೇಕಾಗಿದೆ. ಹಾಗಾಗಿ ಕಳೆದ ಮೂರು ವರ್ಷ ಅಧಿಕಾರ ನಡೆಸುತ್ತಿರುವ ಮೋದಿ ತನ್ನ ಅಭಿವೃದ್ಧಿ ಸಾಧನೆಯ ಬಗ್ಗೆ ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕಾಗಿದೆ ಎಂದರು.

ಕಳೆದ ನವೆಂಬರ್‌ನಲ್ಲಿ ನೋಟು ಅಮಾನ್ಯಗೊಳಿಸಿದ ಮೋದಿ ಅದರಿಂದ ಏನನ್ನು ಸಾಧಿಸಿದ್ದಾರೆ. ದೇಶದ ಜನತೆಗೆ ಇದರಿಂದ ಯಾವ ಪ್ರಯೋಜನವಾಗಿದೆ ಎಂಬುದನ್ನು ತಿಳಿಸಬೇಕಾಗಿದೆ ಎಂದ ಐವನ್ ಡಿಸೋಜ, ಮೋದಿ ದೇಶದ ಜನರ ನಿರೀಕ್ಷೆಯಂತೆ ಆಡಳಿತ ನಡೆಸಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News