​ಗಾಂಜಾ ಸಹಿತ ಆರೋಪಿ ಸೆರೆ

Update: 2017-05-17 17:12 GMT

ಮಂಗಳೂರು, ಮೇ 17: ಗಾಂಜಾ ಸಾಗಾಟ ಮಾಡುತ್ತಿದ್ದ ಬೆಳ್ಮ ರೆಂಜಾಡಿಯ ಯು.ಎ.ಅನ್ಸಾರ್ (28) ಎಂಬಾತನನ್ನು ದೇರಳಕಟ್ಟೆ ಜಂಕ್ಷನ್ ಬಳಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬುಧವಾರ ಬೆಳಗ್ಗೆ ಪೊಲೀಸರು ದೇರಳಕಟ್ಟೆ ಜಂಕ್ಷನ್ ಬಳಿ ಕರ್ತವ್ಯ ನಿರತರಾಗಿದ್ದ ವೇಳೆ ರಿಕ್ಷಾ ಚಲಾಯಿಸಿಕೊಂಡಿದ್ದ ಆರೋಪಿ ಅನ್ಸಾರ್ ಪೊಲೀಸರನ್ನು ಕಂಡು ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದ್ದು, ತಕ್ಷಣ ಪೊಲೀಸರು ಆತನನ್ನು ಹಿಡಿದು ಪರಿಶೀಲಿಸಿದಾಗ 300 ಗ್ರಾಂ ತೂಕದ ಗಾಂಜಾವಿರುವುದು ಬೆಳಕಿಗೆ ಬಂತು.
ಆರೋಪಿಗೆ ಉಪ್ಪಳದ ಮುನೀರ್ ಎಂಬಾತ ಇದನ್ನು ಪೂರೈಸುತ್ತಿದ್ದ ಎನ್ನಲಾಗಿದ್ದು, ಆತನ ಸೆರೆಗೆ ಬಲೆ ಬೀಸಲಾಗಿದೆ. ಆರೋಪಿಯಿಂದ ಗಾಂಜಾ ಮತ್ತು ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇದರ ವೌಲ್ಯ 1 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News