×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2017-05-20 21:18 IST

ಕಾಪು, ಮೇ 20: ವೈಯಕ್ತಿಕ ಕಾರಣದಿಂದ ಮನನೊಂದ ಕಾಪು ಐಸ್ ಪ್ಲಾಂಟ್ ಬಳಿಯ ನಿವಾಸಿ ವಿಜಯ ಮೆಂಡನ್ (55) ಎಂಬವರು ಮೂಳೂರು ಬಿಕ್ತಿಗುತ್ತು ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಶಿರೂರು ಹಣಬರ ಕೇರಿಯ ಶಿವರಾಮ ಹಣಬ (50) ಎಂಬವರು ಪತ್ನಿ ಹಾಗೂ ಮಗಳು ಮನೆ ಬಿಟ್ಟು ಹೋದ ಚಿಂತೆಯಲ್ಲಿ ಮಾನಸಿಕವಾಗಿ ನೊಂದು ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News