ಮಹೇಶ್ ಕುಮಾರ್ ನಡಕ್ಕರ

Update: 2017-05-21 14:17 GMT

ಬೆಳ್ತಂಗಡಿ, ಮೇ 21: ಹಿರಿಯ ಕಾಂಗ್ರೆಸ್ ಮುಖಂಡ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಹೇಶ್ ಕುಮಾರ್ ನಡಕ್ಕರ (55) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮೃತಪಟ್ಟಿದ್ದಾರೆ.

ಇವರು ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷರಾಗಿ, ನಿರ್ದೇಶಕರಾಗಿ, ಕಬಡ್ಡಿ ಅಶೋಸಿಯೇಶನ್‌ನ ಅಧ್ಯಕ್ಷರಾಗಿ, ಬೆಳ್ತಂಗಡಿ ಕಾಂಗ್ರೆಸ್‌ನ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು.

ಬೆಳ್ತಂಗಡಿ ಟಿಎಪಿಸಿಎಂಎಸ್ ಬ್ಯಾಂಕಿನ ನಿರ್ದೇಶಕರಾಗಿದ್ದರು. ಪ್ರಸ್ತುತ ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಮುಂಡೂರು ಶಾರದಾಂಭ ಯುವಕ ಮಂಡಲದ ಅಧ್ಯಕ್ಷರಾಗಿ, ಯುವವಾಹಿನಿ ರಿ. ಬೆಳ್ತಂಗಡಿ ಇದರ ಗೌರವ ಸಲಹೆಗಾರರಾಗಿದ್ದರು. ಕ್ರೀಡಾ ಪಟುವಾಗಿದ್ದ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ಸಹೋದರರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಪಡಂಗಡಿ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಯೋಗೀಶ್ ಕುಮಾರ್ ಕೆ. ಎಸ್. ಸೇರಿದಂತೆ ಪತ್ನಿ, ಎರಡು ಪುತ್ರಿಯರನ್ನು ಅಗಲಿದ್ದಾರೆ.

ಮೃತರ ಮನೆಗೆ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಕೆ. ವಸಂತ ಬಂಗೇರ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ