ಮದ್ಯ ಸಾಗಾಟ: ಆರೋಪಿಯ ಬಂಧನ
Update: 2017-05-21 15:19 GMT
ಹನೂರು, ಮೇ 21: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಸಮೀಪದ ಕಣ್ಣೂರು ಗ್ರಾಮದಲ್ಲಿ ನಡೆದಿದೆ.
ಅನಾಪುರ ಗ್ರಾಮದ ಕುಮಾರ್ ಸ್ವಾಮಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ 90 ಮಿ.ಲೀ ಅಳತೆಯ 75 ಪೌಚುಗಳನ್ನು ಬ್ಯಾಗಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಪರಶುರಾಮ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಈ ಸಂಬಂಧ ಹನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ದಾಳಿಯಲ್ಲಿ ಪಿಎಸ್ಐ ರಾಜಶೇಖರ, ಹೆಡ್ಕಾನ್ಸ್ಸ್ಟೇಬಲ್ ಲಿಂಗರಾಜು, ಸಿದ್ದೇಶ್, ರಾಮಶೆಟ್ಟಿ ಇನ್ನಿತರರು ಭಾಗವಹಿಸಿದ್ದರು.