ನದಿಗೆ ಬಿದ್ದು ಬಾಲಕ ಮೃತ್ಯು

Update: 2017-05-22 16:03 GMT

ಬೆಳ್ತಂಗಡಿ, ಮೇ 22: ಬಾಲಕನೋರ್ವ ನದಿಗೆ ಬಿದ್ದು ಮೃತಪಟ್ಟ ಘಟನೆ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸೋಮವಾರ ನಡೆದಿದೆ.

ಬಂಟ್ವಾಳ ತಾಲೂಕಿನ ಹಬ್ಬೆಟ್ಟು ನಿವಾಸಿ ದಾಮೋದರ ಎಂಬುವರ ಪುತ್ರ 9 ನೇ ತರಗತಿಯ ವಿದ್ಯಾರ್ಥಿ ಅಕ್ಷಯ್ (14) ಮೃತ ಬಾಲಕ ಎಂದು ಗುರುತಿಸಲಾಗಿದೆ.

ರಜೆ ಇದ್ದ ಕಾರಣ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಧರ್ಮಸ್ಥಳಕ್ಕೆ ಬಂದ ಅಕ್ಷಯ್ ಸ್ನಾನಕ್ಕೆಂದು ನದಿಗೆ ಇಳಿಯುವ ಸಂದರ್ಭ ಕಾಲು ಜಾರಿ ನದಿಗೆ ಬಿದ್ದಿದ್ದು, ಸ್ಥಳೀಯರು ರಕ್ಷಿಸುವ ಪ್ರಯತ್ನ ನಡೆಸಿದರೂ ಅದು ಸಫಲವಾಗಲಿಲ್ಲ ಎಂದು ತಿಳಿದುಬಂದಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News