ವಸತಿ ರಹಿತರಿಂದ ಅರ್ಜಿ ಆಹ್ವಾನ
Update: 2017-05-22 16:22 GMT
ಉಡುಪಿ, ಮೇ 22: ಗ್ರಾಪಂ ವ್ಯಾಪ್ತಿಯಲ್ಲಿ ನಿವೇಶನ ಹೊಂದಿರುವ ವಸತಿ ರಹಿತ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಕುಟುಂಬಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ನಿವಾಸ ಯೋಜನೆಯಡಿ ಬೇಡಿಕೆ ಮೇಲೆ (ಗರಿಷ್ಟ ಮಿತಿ ಇರುವುದಿಲ್ಲ) ಮನೆ ನೀಡುವ ಪದ್ಧತಿಗೆ 2017-18ನೆ ಸಾಲಿನಲ್ಲಿ ಚಾಲನೆ ನೀಡಲಾಗಿದೆ.
ನಿವೇಶನ ಹೊಂದಿರುವ ವಸತಿ ರಹಿತ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಕುಟುಂಬಗಳು ಗ್ರಾಪಂನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸ ಬಹುದಾಗಿದೆ. ಎಲ್ಲಾ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ರಹಿತರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಅವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿ ಯೋಜನೆಯ ಸೌಲಭ್ಯ ಪಡೆಯುವಂತೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.