ಅಕ್ರಮ ಮರಳುಗಾರಿಕೆ: 12 ಟಿಪ್ಪರ್, 1 ಜೆಸಿಬಿ ವಶ
Update: 2017-05-22 16:27 GMT
ಕಡಬ, ಮೇ 22: ಇಲ್ಲಿನ ಚಾರ್ವಾಕ ಗ್ರಾಮದ ಗುಜ್ಜರ್ಮೆ ಎಂಬಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವುದನ್ನು ಪತ್ತೆ ಹಚ್ಚಿ ಮರಳು ತುಂಬಿದ್ದ 6 ಟಿಪ್ಪರ್ ಸೇರಿದಂತೆ ಒಟ್ಟು 12 ಟಿಪ್ಪರ್ ಹಾಗೂ 1 ಜೆಸಿಬಿಯನ್ನು ವಶಪಡಿಸಿಕೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಖಚಿತ ವರ್ತಮಾನದ ಮೇರೆಗೆ ಪುತ್ತೂರು ಸಹಾಯಕ ಕಮಿಷನರ್ ರಘುನಂದನ್ ಮೂರ್ತಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಕಡಬ ತಹಶೀಲ್ದಾರರಾದ ಜಾನ್ ಪ್ರಕಾಶ್ ರೋಡ್ರಿಗಸ್, ಕಂದಾಯ ನಿರೀಕ್ಷಕರಾದ ಕೊರಗಪ್ಪ ಹೆಗ್ಡೆ, ಕಡಬ ಠಾಣಾ ಉಪನಿರೀಕ್ಷಕರಾದ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.