ಕರಾವಳಿ ಟೈಮ್ಸ್ ಕನ್ನಡ ಪಾಕ್ಷಿಕದ ವಿಟ್ಲ ಕಚೇರಿ ಉದ್ಘಾಟನೆ

Update: 2017-05-22 17:25 GMT

ಬಂಟ್ವಾಳ, ಮೇ 22: ಕೆಲವೊಂದು ಬಾರಿ ಮಾಧ್ಯಮಗಳು ಬ್ರೇಕಿಂಗ್ ನ್ಯೂಸ್ ಹೆಸರಿನಲ್ಲಿ ಸಮಾಜದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಮಾಡುತ್ತಿರುವುದು ತೀರ ಕಳವಳಕಾರಿ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಗಳು ಸಮಾಜದಲ್ಲಿ ಆತಂಕ ಸೃಷ್ಟಿಸುವ ಬದಲು ಸಮಾಜಕ್ಕೆ ಸಾಂತ್ವಾನದ ಸಿಂಚನ ಮಾಡಬೇಕು ಎಂದು ಬಂಟ್ವಾಳ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಡಾ. ರವೀಶ್ ಸಿ.ಆರ್.ಹೇಳಿದರು. 

ಕರಾವಳಿ ಟೈಮ್ಸ್ ಕನ್ನಡ ಪಾಕ್ಷಿಕದ ವಿಟ್ಲ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕಾ ಧರ್ಮ ಮೀರಿ ಕಾರ್ಯನಿರ್ವಹಿಸುವ ಮಾಧ್ಯಮಗಳ ಕ್ರಮವನ್ನು ಖಂಡಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮುಹಮ್ಮದ್, ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ವಿಟ್ಲ, ಸಿಐಟಿಯು ಬಂಟ್ವಾಳ ಕಾರ್ಯದರ್ಶಿ ಎ.ರಾಮಣ್ಣ ವಿಟ್ಲ, ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಖಲಂದರ್ ಪರ್ತಿಪಾಡಿ, ವಿಟ್ಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಹಾಜಿ ವಿ.ಎಚ್. ಅಶ್ರಫ್ ಭಾಗವಹಿಸಿ ಮಾತನಾಡಿದರು.

ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ವಿಟ್ಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ, ದಲಿತ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು, ಜೆಡಿಎಸ್ ಮುಖಂಡ ಅಶ್ರಫ್ ಮುಹಮ್ಮದ್ ಪೊನ್ನೋಟು, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಬಂಟ್ವಾಲ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಹನೀಫ್ ಬಗ್ಗುಮೂಲೆ, ಜೆಡಿಎಸ್ ಪ್ರಮುಖರಾದ ವಿ.ಎಸ್.ಇಬ್ರಾಹೀಂ ಒಕ್ಕೆತ್ತೂರು, ಜಾಫರ್ ಖಾನ್ ವಿಟ್ಲ, ಎಂ.ಲತೀಫ್ ಪರ್ತಿಪ್ಪಾಡಿ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಅಬೂಬಕ್ಕರ್ ಒಕ್ಕೆತ್ತೂರು, ಅಬ್ದುಲ್ ರಹ್ಮಾನ್ ನೆಲ್ಲಿಗುಡ್ಡೆ, ನಾಮನಿರ್ದೇಶಿತ ಸದಸ್ಯ ಸಮೀರ್ ಪಲಿಕೆ, ಮಾಜಿ ಸದಸ್ಯ ವಿ.ಕೆ.ಎಂ.ಅಶ್ರಫ್, ನೆಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ಬಾಸ್ ನೇರಳಕಟ್ಟೆ, ವಿ.ಎ.ರಶೀದ್ ವಿಟ್ಲ, ಬಿಎಸ್ಪಿ ಮುಖಂಡ ಮೂಸ ಕರೀಂ ಮಾಣಿ, ಪತ್ರಿಕೆ ಉಪ ಸಂಪಾದಕ ಯು.ಮುಸ್ತಫಾ ಪಾಣೆಮಂಗಳೂರು, ಉದ್ಯಮಿಗಳಾದ ಹಸೈನಾರ್ ಕಾನತ್ತಡ್ಕ, ಮುಹಮ್ಮದ್ ರಫೀಕ್ ಎಸ್.ಎಸ್.ಕೋಡಾಜೆ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಪತ್ರಿಕೆಯ ಎರಡನೇ ಸಂಪುಟದ 14ನೆ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಕರಾವಳಿ ಟೈಮ್ಸ್ ಪ್ರಧಾನ ಸಂಪಾದಕ ಪಿ.ಎಂ.ಅಶ್ರಫ್ ಪಾಣೆಮಂಗಳೂರು ಸ್ವಾಗತಿಸಿದರು.

ವಿಟ್ಲ ವರದಿಗಾರ ಅಬೂಬಕ್ಕರ್ ಅನಿಲಕಟ್ಟೆ ವಂದಿಸಿದರು. ಉಪ ಸಂಪಾದಕ ಅಬ್ದುಲ್ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News