ಅಪಘಾತ: ಪತ್ನಿ ಮೃತ್ಯು, ಪತಿ, ಮಗುವಿಗೆ ಗಾಯ
Update: 2017-05-22 18:47 GMT
ಮಂಡ್ಯ, ಮೇ 23: ಮೊಪೆಡ್ಗೆ ಲಾರಿ ಢಿಕ್ಕಿ ಹೊಡೆದು ಪತ್ನಿ ಸಾವನ್ನಪ್ಪಿ, ಪತಿ ಹಾಗೂ ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಂಗಳೂರು ಮೈಸೂರು ಹೆದ್ದಾರಿಯ ನಗುವನಹಳ್ಳಿ ಬಳಿ ಸೋಮವಾರ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕು ಮೇಳಾಪುರದ ಪುಷ್ಪಲತ (29) ಅಪಘಾತದಲ್ಲಿ ಸಾವನ್ನಪ್ಪಿದ್ದು, ಪತಿ ಸತೀಶ್ ಮತ್ತು ಮಗು ತೀವ್ರವಾಗಿ ಗಾಯಗೊಂಡಿದ್ದಾರೆ.
ಇವರನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸತೀಶ್ ದಂಪತಿ ತಮ್ಮ ಮಗುವಿನೊಂದಿಗೆ ಮೊಪೆಡ್ನಲ್ಲಿ ಕಾರ್ಯನಿಮಿತ್ತ ಶ್ರೀರಂಗಪಟ್ಟಣಕ್ಕೆ ತೆರಳುತ್ತಿದ್ದಾಗ ಮೈಸೂರಿನಿಂದ ಬರುತ್ತಿದ್ದ ಲಾರಿ ಹಿಂದಿನಿಂದ ಢಿಕ್ಕಿಯೊಡೆದು ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.