ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ನಾಲ್ವರ ರಕ್ಷಣೆ

Update: 2017-05-23 06:49 GMT

ಉಳ್ಳಾಲ, ಮೇ 23: ವಿಹಾರಕ್ಕೆಂದು ಬಂದಿದ್ದ ವೇಳೆ ಸಮುದ್ರಪಾಲಾಗುತ್ತಿದ್ದ ನಾಲ್ವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಮೊಗವೀರಪಟ್ನದಲ್ಲಿ ನಡೆದಿದೆ.

ಉಳ್ಳಾಲ ಮೊಗವೀರಪಟ್ನದ ಸಮುದ್ರವಿಹಾರಕ್ಕೆಂದು ನಾಲ್ವರು ಆಗಮಿಸಿದ್ದು, ಈ ಸಂದರ್ಭ ಅಲೆಗಳ ರಭಸಕ್ಕೆ ಸಿಲುಕಿ ಸಮುದ್ರಪಾಲಾಗುತ್ತಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯ ಮೊಗವೀರರು ಅವರನ್ನು ರಕ್ಷಿಸಿದ್ದಾರೆ.     

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News