ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆ

Update: 2017-05-23 10:27 GMT

ಮಂಗಳೂರು, ಮೇ 23: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರ ಸಭೆಯು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ರಮಾನಾಥ ರೈಯವರ ಅಧ್ಯಕ್ಷತೆಯಲ್ಲಿ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಮೇ 24ರಂದು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಸಂಸದರು, ಹಾಲಿ ಮತ್ತು ಮಾಜಿ ಸಚಿವರು, ಹಾಲಿ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರು, ಹಾಲಿ ಮತ್ತು ಮಾಜಿ ಶಾಸಕರು ಭಾಗವಹಿಸುವಂತೆ ಸೂಚಿಸಲಾಯಿತು.

ಮೈಸೂರು ವಿಭಾಗೀಯ ಮಟ್ಟದ ಸವಲತ್ತು ವಿತರಣೆ ಕಾರ್ಯಕ್ರಮ ಜೂ.3ಂದು ಮೈಸೂರಿನಲ್ಲಿ ನಡೆಯಲಿದ್ದು, ಇದರಲ್ಲಿ ಜಿಲ್ಲೆಯ 2,000ದಷ್ಟು ಮುಖಂಡರು ಮತ್ತು ಸಕ್ರಿಯ ಕಾರ್ಯಕರ್ತರು ಭಾಗವಹಿಸಲು ಸೂಚಿಸಲಾಯಿತು. ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯತ್ವ ನೋಂದಾವಣೆಯ ಪಟ್ಟಿಯನ್ನು ಮೇ 31ರೊಳಗೆ ತಲುಪಿಸುವಂತೆ ಎಲ್ಲ ಬ್ಲಾಕ್ ಅಧ್ಯಕ್ಷರಿಗೆ ಸೂಚಿಸಲಾಯಿತು ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಧನಾ ಸಮಾವೇಶ ನಡೆಸಲು ಸಭೆ ನಿರ್ಣಯಿಸಿತು.

ಸಭೆಯಲ್ಲಿ ಕೆಪಿಸಿಸಿ ಸದಸ್ಯರಾದ ಎ.ಸಿ.ಭಂಡಾರಿ, ಯು.ಕೆ.ಮೋನು, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಮೇಯರ್ ಕವಿತಾ ಸನಿಲ್, ಪದ್ಮನಾಭ ನರಿಂಗಾನ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಮಾಜಿ ಮೇಯರ್‌ಗಳು, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ವಕ್ತಾರರು, ಜಿಪಂ ಮತ್ತು ತಾಪಂ ಸದಸ್ಯರು, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್ ಸ್ವಾಗತಿಸಿದರು. ಸಂತೋಷ್ ಕುಮಾರ್ ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News