ಫೇಸ್‌ಬುಕ್‌ನಲ್ಲಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಓರ್ವನ ಬಂಧನ

Update: 2017-05-23 18:15 GMT

ಸಂಭಾಲ್, ಮೇ 23: ನಕಲಿ ಫೇಸ್‌ಬುಕ್ ಖಾತೆಯ ಮೂಲಕ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಬಗ್ಗೆ ಅವಹೇಳನಾತ್ಮಕ ಹೇಳಿಕೆ ಪೋಸ್ಟ್ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಮಂತ್ರಿಯ ಫೋಟೋ ಮತ್ತು ಆಕ್ಷೇಪಾರ್ಹ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕುರಿತು ಮೇ 15ರಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಬಳಿಕ ಸಾಹಿಲ್ ಮಲಿಕ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈತನನ್ನು ವಿಚಾರಣೆ ನಡೆಸಿದಾಗ ಫೇಸ್‌ಬುಕ್ ಖಾತೆ ನಕಲಿ ಎಂದು ಗೊತ್ತಾಗಿದ್ದು ಮುನಝೀರ್ ಎಂಬಾತ ಇದನ್ನು ತೆರೆದಿರುವುದಾಗಿ ಮಲಿಕ್ ತಿಳಿಸಿದ್ದಾನೆ. ಅದರಂತೆ ಮುನಝೀರ್‌ನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News