ಸಿಎಫ್‌ಐ ನಾಟಕರ ಬಂಧನ ವಿರುದ್ಧ ಪ್ರತಿಭಟನೆ

Update: 2017-05-23 18:33 GMT

ಮಂಗಳೂರು, ಮೇ 23: ಏಮ್ಸ್ ಪ್ರವೇಶ ಪರೀಕ್ಷೆಗಳಲ್ಲಿ ವಸ್ತ್ರ ಸಂಹಿತೆಯನ್ನು ಹೇರಿ ಧಾರ್ಮಿಕ ಮತ್ತು ವೈಯಕ್ತಿಕ ಸ್ವಾತಂತ್ರ ಹರಣವನ್ನು ವಿರೋಧಿಸಿ ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ)ದ ನಾಯಕರ ಬಂಧನವನ್ನು ವಿರೋಧಿಸಿ ಸಿಎಫ್‌ಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಯಿತು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಿಎಫ್‌ಐ ನಾಯಕರ ಹಾಗೂ ಕಾರ್ಯಕರ್ತರ ಬಂಧನವು ಅಕ್ರಮವಾಗಿದ್ದು, ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಅಲ್ಲದೆ, ಏಮ್ಸ್ ಪ್ರವೇಶ ಪರೀಕ್ಷೆಯಲ್ಲಿ ಹೇರಿದ ವಸ್ತ್ರ ಸಂಹಿತೆ ನೀತಿಯನ್ನು ಕೂಡಲೇ ಕೈಬಿಡಬೇಕೆಂದು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಧರಣಿಯಲ್ಲಿ ಆಗ್ರಹಿಸಿದರು.

ಸಿಎಫ್‌ಐ ಜಿಲ್ಲಾ ಸಮಿತಿಯ ಅಧ್ಯಕ್ಷ ಅತಾವುಲ್ಲಾ ಪೂಂಜಲ್‌ಕಟ್ಟೆ, ಸಮಿತಿ ಸದಸ್ಯರಾದ ರಿಯಾಝ್ ಕೊಡಂಬು, ಮುಹಮ್ಮದ್ ಇಫಾಝ್, ತಾಜುದ್ದೀನ್ ಮೊದಲಾದವರು ಧರಣಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News