ಹಿಂಸೆ ನೀಡುತ್ತಿದ್ದ ಆರೋಪ:ಪತ್ನಿಯಿಂದಲೇ ಪತಿಯ ಹತ್ಯೆ

Update: 2017-05-23 19:08 GMT

ಬೆಂಗಳೂರು, ಮೇ 24: ಹಿಂಸೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಪತಿಯನ್ನೆ ಪತ್ನಿ ಕತ್ತು ಹಿಸುಕಿ ಕೊಲೆ ಮಾಡಿರುವ ಪ್ರಕರಣ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಸುಬೇದಾರ್‌ ಪಾಳ್ಯದ ಸತೀಶ್(45) ಕೊಲೆಯಾದವರು, ಕಲ್ಪನಾ (40) ಕೊಲೆಗೈದಿರುವ ಆರೋಪಿ ಎನ್ನಲಾಗಿದೆ.

ಸುಬೇದಾರ್ ಪಾಳ್ಯದಲ್ಲಿರುವ ಖಾಸಗಿ ಸೆಕ್ಯೂರಿಟಿ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸತೀಶ್, ಪ್ರತಿದಿನ ರಾತ್ರಿ ಪತ್ನಿಗೆ ಹಲ್ಲೆ ಮಾಡಿ ಹಿಂಸೆ ನೀಡುತ್ತಿದ್ದ ಎಂದು ತಿಳಿದುಬಂದಿದೆ.

ಸೋಮವಾರ ಮಧ್ಯರಾತ್ರಿ 12ರ ಸುಮಾರಿಗೆ ಮದ್ಯದ ಅಮಲಿನಲ್ಲಿ ಮನೆಗೆ ಬಂದ ಸತೀಶ್, ಪತ್ನಿ ಹಲ್ಲೆ  ಮಾಡಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ಪತ್ನಿ, ಸತೀಶ್ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಯಶವಂತಪುರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News