ಚಾಲಕನ ನಿಯಂತ್ರಣ ತಪ್ಪಿ ಆಟೊಗೆ ಢಿಕ್ಕಿ ಹೊಡೆದ ಬಸ್: ಇಬ್ಬರು ಮೃತ್ಯು

Update: 2017-05-24 10:07 GMT

ಹೊಸದಿಲ್ಲಿ, ಮೇ 24: ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸೊಂದು ರಿಕ್ಷಾವೊಂದಕ್ಕೆ ಢಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಇಲ್ಲಿನ ಆಝಾದ್ ಪುರ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.

ಅಪಘಾತ ನಡೆದ ತಕ್ಷಣ ಬಸ್ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News